ಕಗ್ಗ... ೧
ಶ್ರೀ ವಿಷ್ಣು ವಿಶ್ವಾದಿ ಮೂಲ ಮಾಯಾಲೋಲ ।
ದೇವ ಸರ್ವೇಶ ಪರಬೊಮ್ಮನೆಂದು ಜನಂ ॥
ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ ।
ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ॥ ೧ ॥
....
ಸಾಮಾನ್ಯ ಜನರು ದೇವರನ್ನು ಕಂಡಿಲ್ಲ. ಆದರೂ ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿದ್ದಾರೆ. ಆ ವಿಚಿತ್ರಕ್ಕೆ ಶರಣಾಗು ಎನ್ನುವುದು ಈ ಪದ್ಯದ ತಾತ್ಪರ್ಯ.
.... ನಿರೂಪಣೆ- ತಿಮ್ಮಣ್ಣ ಭಟ್ ಬೆಂಗಳೂರು
ಸಂಗ್ರಹ - ಶ್ರೀ ಸ್ವರ್ಣವಲ್ಲೀ ಭಕ್ತವೃಂದ .
.jpg)