ಏನು ಜೀವನದರ್ಥ? ಏನು ಪ್ರಪಂಚಾರ್ಥ? ।
ಏನು ಜೀವಪ್ರಪಂಚಗಳ ಸಂಬಂಧ? ॥
ಕಾಣದಿಲ್ಲಿರ್ಪುದೇನಾನುಮುಂಟೆ? ಅದೇನು? ।
ಜ್ಞಾನಪ್ರಮಾಣವೇಂ? - ಮಂಕುತಿಮ್ಮ ॥ ೪ ॥
ಈ ನಮ್ಮ ಜೀವನಕ್ಕೆ ಏನಾದರೂ ಅರ್ಥ ಇದೆಯೇ? ನಾವಿರುವ ಈ ಪ್ರಪಂಚದ ಅರ್ಥವೇನು? ನಮ್ಮ ಮತ್ತು ನಾವು ಇರುವ ಈ ಪ್ರಪಂಚದ ಪರಸ್ಪರ ಸ೦ಬ೦ಧವೇನು? ಇವೆರಡನ್ನೂ ಬೆಸೆದಿರುವ, ನಮ್ಮ ಕಣ್ಣಿಗೆ ಕಾಣದ ಒಂದು ಶಕ್ತಿ ಏನಾದರೂ ಇದೆಯೇ? ಹಾಗಿದ್ದರೆ ಅದೇನು? ಅದು ನಮ್ಮ ವಿಚಾರ ಮತ್ತು ಜ್ಞಾನದ ಪರಿಧಿಯಿಂದ ಮೀರಿದೆಯೇ? ಹಾಗಾದರೆ ಅದು ಏನು? ” ಎಂಬ ಜಿಜ್ಞಾಸೆಯ ಭಾವಗಳನ್ನು ವ್ಯಕ್ತವಾಗುವುದರ ಜೊತೆಗೆ ಇವುಗಳನ್ನು ಯತಾರ್ಥವಾಗಿ ತಿಳಿಯಬೇಕಾದುದೂ ಅಗತ್ಯ.
ನಿರೂಪಣೆ - ತಿಮ್ಮಣ್ಣ ಭಟ್ ಬೆಂಗಳೂರು.
ಸಂಗ್ರಹ - ಶ್ರೀ ಸ್ವರ್ಣವಲ್ಲಿ ಭಕ್ತವೃಂದ
.jpg)