🌺 ज्ञानं विज्ञानसहितं यज्ज्ञात्वा मोक्ष्यसेऽशुभात्।🌺

ಕಗ್ಗಸೌರಭ- 8


ಕಗ್ಗಸೌರಭ - 8 


ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? ।

ಭ್ರಮಿಪುದೇನಾಗಡಾಗ ಕರ್ತೃವಿನ ಮನಸು? ॥

ಮಮತೆಯುಳ್ಳವನಾತನಾದೊಡೀ ಜೀವಗಳು ।

ಶ್ರಮಪಡುವುವೇಕಿಂತು? - ಮಂಕುತಿಮ್ಮ ॥ ೮ ॥

ಈ ಭಗವಂತನ ಸೃಷ್ಟಿಯಲ್ಲಿ ಒಂದು ಕ್ರಮ ಅಥವಾ ಗುರಿ ಏನಾದರೂ ಇದೆಯೇ? ಈ ಸೃಷ್ಟಿಕರ್ತನ ಮನಸ್ಸು ಏಕೆ ಆಗಾಗ ವಿಚಲಿತವಾಗಿ ಎಲ್ಲೆಲ್ಲೋ ಹರಿದಾಡುತ್ತದೆ. ?ತಾನು ಸೃಷ್ಟಿಸಿದ ಜೀವಿಗಳ ಮೇಲೆ ಅವನಿಗೆ ಪ್ರೀತಿ ವಾತ್ಸಲ್ಯಗಳು ಇರುವುದಾದರೆ ಈ ಜೀವಿಗಳು ಏತಕ್ಕಾಗಿ ಈ ರೀತಿಯ ಕಷ್ಟಗಳನ್ನು ಅನುಭವಿಸುತ್ತವೆ?  

ಇದೆಲ್ಲವೂ ಭಗವಂತನ ಲೀಲೆಯಾದ್ದರಿಂದ, ಬೇಗುದಿ ಬೇಡ, ವಿಶ್ವಾಸವಿರಲಿ.

ನಿರೂಪಣೆ - ತಿಮ್ಮಣ್ಣ ಭಟ್, ಬೆಂಗಳೂರು.

ಪ್ರಸರಣ  - ಸ್ವರ್ಣವಲ್ಲಿ ಭಕ್ತವೃಂದ